D.K. Shivakumar: ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.
D.K. Shivakumar : “ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ.ಉಪ್ಪು ತಿಂದವನು ನೀರು ಕುಡಿಯುತ್ತಾನೆ, ಈ ವಿಚಾರವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿ ನಾಯಕ ದೇವರಾಜೇಗೌಡ ಅವರು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದರು.ಈ ಬಗ್ಗೆ ಮಾಧ್ಯಮಗಳಿಗೂ ತಿಳಿಸಿದ್ದಾರೆ. ಹೀಗಿರುವಾಗ ನನಗೂ ಈ ಪ್ರಕರಣಕ್ಕೂ ಏನು ಸಂಬಂಧ?ಇದೆಲ್ಲವೂ ಹಳೇ ವಿಡಿಯೋ ಎಂದು ಸ್ವತಃ ರೇವಣ್ಣ ಅವರೇ ಒಪ್ಪಿಕೊಂಡಿದ್ದಾರೆ. ಉಪ್ಪು ತಿಂದವನು ನೀರು ಕುಡಿಯುತ್ತಾನೆ.
ಪೆನ್ ಡ್ರೈವ್ ವಿಚಾರ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ಅವರಿಗೆ ಗೊತ್ತಿತ್ತು ಎಂಬ ದೇವರಾಜೇಗೌಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮಗೆ ಈ ವಿಚಾರ ಗೊತ್ತಿದ್ದರೆ ನಾವು ಮುಂಚಿತವಾಗಿ ರಿಲೀಸ್ ಮಾಡಬಹುದಾಗಿತ್ತು. ಇಂದು ಬೆಳಗ್ಗೆ ಅವರ ಚಾಲಕರೇ ಈ ಪೆನ್ ಡ್ರೈವ್ ವಿಚಾರ ಬಹಿರಂಗಗೊಳಿಸಿರುವುದಾಗಿ ಹೇಳಿದ್ದಾರೆ. ನಾನಂತೂ ಇಂತಹ ಚಿಲ್ಲರೆ ಕೆಲಸಕ್ಕೆ ಕೈ ಹಾಕುವುದಿಲ್ಲ. ಕುಮಾರಸ್ವಾಮಿ ಈಗ ಬೇರೆಯವರ ಮೇಲೆ ದೂರಬೇಕು. ಹೀಗಾಗಿ ನನ್ನ ಹೆಸರು ಹೇಳುತ್ತಿದ್ದಾರೆ. ನನ್ನ ಹೆಸರು ಹೇಳಿದರೆ ಅವರಿಗೆ ನೆಮ್ಮದಿ. ಅಮಿತ್ ಶಾ ಅವರು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದಿದ್ದಾರೆ. ನಮಗೆ ಮಾಹಿತಿ ಬಂದ ತಕ್ಷಣವೇ ನಾವು ತನಿಖೆಗೆ ಆದೇಶ ಮಾಡಿದ್ದೇವೆ.
ರೇವಣ್ಣ ಪ್ರಕರಣವೊಂದರಲ್ಲಿ ಎ1 ಆಗಿದ್ದು ಅವರನ್ನು ಬಂಧಿಸಿ ಯಾಕೆ ತನಿಖೆ ನಡೆಸುತ್ತಿಲ್ಲ ಎಂದು ಕೇಳಿದಾಗ, “ತನಿಖೆ ಮಾಡುತ್ತಿರುವ ಪೊಲೀಸರು ಅವರ ಕೆಲಸ ಮಾಡುತ್ತಿದ್ದಾರೆ. ನಾನು ಅವರ ಕೆಲಸ ಮಾಡಲು ಆಗುವುದಿಲ್ಲ. ಕುಮಾರಸ್ವಾಮಿ, ಅಮಿತ್ ಶಾ ನನ್ನ ಹೆಸರು ಪ್ರಸ್ತಾಪ ಮಾಡಿರುವುದರಿಂದ ಹಾಗೂ ನಾನು ಸರ್ಕಾರದ ಭಾಗವಾಗಿರುವುದರಿಂದ ಸರಳವಾಗಿ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ವೈಯಕ್ತಿಕವಾಗಿ ಈ ಪ್ರಕರಣಕ್ಕೆ ಸಂಬಂಧವಿಲ್ಲ. ರಾಜ್ಯದ ಮಹಿಳೆಯರ ಗೌರವ, ಬದುಕು ರಕ್ಷಣೆಗೆ ನನ್ನ ಆದ್ಯತೆ. ಅವರು ಯಾವ ಭಯ, ಆಮಿಷಕ್ಕೆ ಒಳಗಾದರೊ ಗೊತ್ತಿಲ್ಲ.
ನಾನು, ಪತ್ನಿ, ಮಗ ಸೊಸೆ, ಮೊಮ್ಮಗ ಮಾತ್ರ ನನ್ನ ಕುಟುಂಬ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರಷ್ಟೇ ಅವರ ಕುಟುಂಬವಾದರೆ, ದೇವೇಗೌಡರನ್ನು ಯಾಕೆ ಬಿಟ್ಟರು?” ಎಂದು ಪ್ರಶ್ನಿಸಿದರು. ಈ ವಿಚಾರ ರಾಜಕೀಯವಾಗಿ ಚರ್ಚೆಯಾಗುತ್ತಿದ್ದು, ರಾಜಕೀಯ ಮಧ್ಯೆ ಸಂತ್ರಸ್ತರಿಗೆ ನ್ಯಾಯ ಸಿಗುತ್ತಾ ಎಂದು ಕೇಳಿದಾಗ, “ನೀವು ಕುಮಾರಣ್ಣ ಅವರ ಉಪ್ಪು ತಿಂದವರು, ನೀರು ಕುಡಿಯಬೇಕು ಎಂಬ ಮಾತನ್ನು ಗಮನಿಸಿ. ಅವರಿದ್ದಾರೆ, ಜತೆಗೆ ನಾರಿ ಶಕ್ತಿಗೆ ರಕ್ಷಣೆ ನೀಡುತ್ತೇವೆ ಎನ್ನುವ ಅವರ ಮೈತ್ರಿ ಸ್ನೇಹಿತರಿದ್ದಾರೆ” ಎಂದರು.
Prajwal Revanna Prajwal Revanna Case Prajwal Revanna News Update Prajwal Revanna News Prajwal Revanna Today News Prajwal Revanna Vidio Prajwal Revanna Pendrive Prajwal Revanna Latest News Prajwal Revanna Viral Video Prajwal Revanna Pen Drive News Jds Prajwal Revanna Prajwal Revanna Pendrive Video Prajwal Revanna Pen Drive Issue Prajwal Revanna Obscene Videos Case
Malaysia Latest News, Malaysia Headlines
Similar News:You can also read news stories similar to this one that we have collected from other news sources.
ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
Read more »
ಗ್ಯಾರಂಟಿಗಳನ್ನು ಮುಟ್ಟೋದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು!DCM DK Shivakumar: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
Read more »
ರಾಕೇಶ್ ಸಿದ್ದರಾಮಯ್ಯ ಸಾವಿನ ರಹಸ್ಯವೂ ಬಯಲಾಗಲಿದೆ: ಕುಮಾರಸ್ವಾಮಿ ಹೊಸ ಬಾಂಬ್!ಸಿದ್ದರಾಮಯ್ಯರ ಕುಟುಂಬದಲ್ಲಿ ನಡೆದಿದ್ದ ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಯಾವ ರೀತಿ ಸಹಾಯ ಮಾಡಿದ್ದಾರೆ ಎಂಬುದನ್ನು ಮರೆತಿದ್ದೀರಿ. ಎಲ್ಲಾ ದಾಖಲೆಗಳನ್ನೂ ನಾವು ಹೊರಗಡೆ ತರುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
Read more »
ಬರ್ತ್ ಟ್ಯಾಕ್ಸ್ಯೂ ಇಲ್ಲ, ಡೆತ್ ಟ್ಯಾಕ್ಸ್ಯೂ ಇಲ್ಲ, ಪಿತ್ರೊಡಾ ಹೇಳಿಕೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್DK Shivakumar Statement: ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ. ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನ ಆಗಿಲ್ಲ. ಅದು ಸುಳ್ಳು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
Read more »
ನನ್ನ ಜೀವ, ನನ್ನ ದೇಹ ಇರುವುದೇ ನಮ್ಮ ಜನರಿಗಾಗಿ : ಡಿಸಿಎಂ ಡಿ.ಕೆ. ಶಿವಕುಮಾರ್ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Read more »
PSI ಹಗರಣದ ಕಿಂಗ್ಪಿನ್ ಮನೆಯಲ್ಲಿ ಬಿಜೆಪಿ ಸಂಸದ ಉಮೇಶ್ ಜಾಧವ್ ಭರ್ಜರಿ ಭೋಜನ!PSI ಹಗರಣದ ಕಿಂಗ್ಪಿನ್ ಆರ್.ಡಿ.ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
Read more »